ತಜ್ಞರ ಜತೆ ಚರ್ಚಿಸಿ ಕೋವಿಡ್ ತಡೆ ಕುರಿತು ಸರಕಾರ ಕ್ರಮ -ನಳಿನ್ ಕುಮಾರ್

ಮಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಜ್ಞರ ಜೊತೆಯಲ್ಲಿ ಸಭೆ ನಡೆಸಿದ ಬಳಿಕ ಅಂತಿಮ‌ ನಿರ್ಧಾರ ಹೊರ ಬೀಳಲಿದೆ ಎಂದು ಸಂಸದ ನಳಿನ್ ಕುಮಾರ್ ಹೇಳಿದರು.

ಅವರು ರಾಜ್ಯಪಾಲರ ಜೊತೆ ವೀಡಿಯೊ ಕಾನ್ಫರೆನ್ಸ್ ನಡೆಸಿದ ಬಳಿಕ ಮಂಗಳೂರಲ್ಲಿ ತಮ್ಮ ಕಛೇರಿ ಕೋವಿಡ್ ವಾರ್‌ರೂಂ ನಲ್ಲಿ ಪತ್ರಕರ್ತರ ಜತೆ ಮಾತನಾಡಿದರು.

ಜನರು ಮಾಸ್ಕ್ ಹಾಕದೆ ತಿರುಗಾಡುತ್ತಿದ್ದಾರೆ.‌ ಸಾಮಾಜಿಕ ಅಂತರವೂ ಕಡಿಮೆಯಾಗಿದೆ. ಇದನ್ನು ತಪ್ಪಿಸಲು ಕಠಿಣ ನಿರ್ಧಾರ ಸರಕಾರ ತೆಗೆದುಕೊಳ್ಳಬಹುದು.

ಜನರು ಸರಕಾರದ ನಿರ್ಧಾರಕ್ಕೆ ಬೆಂಬಲ ನೀಡಬೇಕು. ಎಲ್ಲ ಪಕ್ಷದವರೂ ಸರಕಾರದ ನಿರ್ಧಾರ ಬೆಂಬಲಿಸಬೇಕು. ಈಗಾಗಲೇ ಪ್ರತಿಪಕ್ಷದ ಮುಖಂಡರು ಅವರ ಅಭಿಪ್ರಾಯ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಜ್ಞರ ಜೊತೆಯಲ್ಲಿ ಸಭೆ ನಡೆಸಿದ ಬಳಿಕ ಅಂತಿಮ‌ ನಿರ್ಧಾರ ಹೊರ ಬೀಳಲಿದೆ ಎಂದರು.

Leave A Reply

Your email address will not be published.