ಎರಡು ವರ್ಷಗಳ ಕಾಲ‌ ಹಡೀಲು ಬಿಟ್ಟ ಕೃಷಿ ಭೂಮಿ ಸರಕಾರದ ವಶಕ್ಕೆ

ಒಂದೆರಡು ವರ್ಷಗಳ ಕಾಲ ಹಡಿಲು ಬಿಟ್ಟ ಭೂಮಿ ಯನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಕೆಳಪರ್ಕಳದ ಗೋಪಾಲಕೃಷ್ಣ ದೇವಸ್ಥಾನದ ಸಮೀಪದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಕೃಷಿ ಆಂದೋಲನದ ಪ್ರಥಮ ಹಂತದ ಕೃಷಿ ಚಟುವಟಿಕೆ ನಡೆಸುವ ಗದ್ದೆಗಳಿಗೆ ಸಮರ್ಪಕ ವಾಗಿ ನೀರು ಹರಿದು ಹೋಗಲು ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಹಡಿಲು ಬಿಟ್ಟ ಕೃಷಿ ಭೂಮಿಯನ್ನು ಸರಕಾರ ಸುಪರ್ದಿಗೆ ತೆಗೆದು ಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದ್ದು ಇಂತಹವರಿಗೆ ನೊಟೀಸು ನೀಡಲಾಗುತ್ತದೆ. ಜಿಲ್ಲೆ ಯಲ್ಲಿ ಹಡಿಲು ಬಿಟ್ಟಿರುವ ಭೂಮಿಗಳನ್ನು ಗುರುತಿಸುವಂತೆ ಈಗಾಗಲೇ ತಹಶೀಲ್ದಾರ್‌‌ಗಳಿಗೆ ಸೂಚಿಸಲಾಗಿದೆ.

DAILY PRIZE DRAW
23:59:59
Daily Prize
Enter Now and Earn $50
View this ad to enter today's drawing
1,453 entries today

ಎರಡನೇ ಹಂತ ವಾಗಿ ಹಡಿಲು ಭೂಮಿಯ ಮಾಲಕರಿ ಗೆ ನೊಟೀಸು ನೀಡಲಾಗು ತ್ತದೆ. ನಂತರವೂ ಭೂಮಿ ಯಲ್ಲಿ ಕೃಷಿ ಮಾಡದೆ ಹೋದರೆ, ಅದನ್ನು ಸರಕಾರದ ವಶಕ್ಕೆ ತೆಗೆದುಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ ಎಂದರು.

Leave A Reply

Your email address will not be published.