ಮಂಗಳೂರು ವಿಶ್ವವಿದ್ಯಾನಿಲಯ ಎಪ್ರಿಲ್ 21 ರಿಂದ ನಡೆಯಬೇಕಾಗಿದ್ದ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ

ರಾಜ್ಯ ಸರಕಾರ ನಿನ್ನೆ ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಪ್ರಕಟವಾದ ಬೆನ್ನಲ್ಲೆ ಮಂಗಳೂರು ವಿಶ್ವವಿದ್ಯಾನಿಲಯ ಎಪ್ರಿಲ್ 21 ರಿಂದ ನಡೆಯಬೇಕಾಗಿದ್ದ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳನ್ನು ಬಂದ್ ಮಾಡಿ ರಾಜ್ಯ ಸರಕಾರ ನಿನ್ನೆ ಆದೇಶ ಹೊರಡಿಸಿದೆ.
ಅದೇ ಆದೇಶದ ಭಾಗವಾಗಿ ಪರೀಕ್ಷೆಗಳನ್ನು ಮತ್ತೊಂದು ದಿನಾಂಕದಂದು ನಡೆಸಲಾಗುವುದು ಎಂದು ಪರೀಕ್ಷಾಂಗ ಮುಖ್ಯಸ್ಥ ಪ್ರೋ.ಧರ್ಮಾ ತಿಳಿಸಿದ್ದಾರೆ.

ಇನ್ನು ಮುಂದಿನ ಆದೇಶದವರೆಗೆ ಯಾವುದೇ ಶೈಕ್ಷಣಿಕ ಚಟವಟಿಕೆಗಳು ಇರೋದಿಲ್ಲ. ಎಲ್ಲವೂ ಪೂರ್ತಿ ಬಂದ್ ಆಗಿರಲಿದೆ.

Leave A Reply

Your email address will not be published.