ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು   | ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಘಟನೆ

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಜರ್ವತ್ತು ಹೊಳೆಗೆ ಸ್ನಾನ ಮಾಡಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಎ.21ರಂದು ನಡೆದಿದೆ.

ಹೆಬ್ರಿ ಗ್ರಾಮದ ಬೊಳಂಗಲ್ ನಿವಾಸಿ ಸುಬ್ಬಣ್ಣ ನಾಯಕ್ ಎಂಬವರ ಮಗ ಕೃಷ್ಣಮೂರ್ತಿ(30) ಎಂದು ಗುರುತಿಸಲಾಗಿದೆ.

ಉಡುಪಿಯ ಬಟ್ಟೆ ಅಂಗಡಿ ಯಲ್ಲಿ ಸೇಲ್ಸ್ಮೆನ್ ಆಗಿ ಕೆಲಸ ಮಾಡಿಕೊಂಡಿದ್ದ ಇವರು, ಎ.20ರಂದು ಮನೆಗೆ ಬಂದಿದ್ದು, ಮರುದಿನ ಬೆಳಗ್ಗೆ ಮನೆಯ ಬಳಿಯ ಹೊಳೆಗೆ ಸ್ನಾನಕ್ಕೆ ತೆರಳಿದ್ದರು.

ಈ ವೇಳೆ ಅವರು ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟರು. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.