ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದ ಯುವಕ

ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನನ್ನು ಸ್ಥಳೀಯ ಯುಕರು ರಕ್ಷಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕ ಶ್ರವಣಬೆಳಗೊಳ ಮೂಲದವನು ಎನ್ನಲಾಗಿದೆ.

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು
ಗೂಡಿನಬಳಿಯ ನಿವಾಸಿಗಳಾದ ಸತ್ತಾರ್ ಗೂಡಿನಬಳಿ ಮತ್ತು ಸ್ವಾದಿಕ್ ಎಂಬವರು ನದಿಗೆ ಧುಮುಕಿ ರಕ್ಷಿಸಿದ ಘಟನೆ ನಡೆದಿದೆ.

ಶುಕ್ರವಾರದಂದು ಸಂಜೆ ಪಾಣೆಮಂಗಳೂರು ಹೊಸ ನೇತ್ರಾವತಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಆಗ ಸ್ಥಳೀಯರು, ಜೀವರಕ್ಷಕ ಸತ್ತಾರ್ ಅವರಿಗೆ ಸುದ್ದಿ ತಲುಪಿಸಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಸತ್ತಾರ್ ಹಾಗೂ ಸ್ವಾದಿಕ್ ಎಂಬವರು ಜೊತೆಗೂಡಿ ನದಿಗೆ ಧುಮುಕಿ ರಕ್ಷಿಸಿ ಮೇಲೆತ್ತಿದ್ದಾರೆ.

ಆ ನಂತರ ಯುವಕನನ್ನು ಪೊಲೀಸರ ಸಹಾಯದಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಆತನ ಸಂಬಂಧಿಕರನ್ನು ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ. ಯುವಕನ ಸಂಬಂಧಿಕರು ಕೂಡಲೇ ಆಸ್ಪತ್ರೆಗೆ ಧಾವಿಸಿ ಬಂದು ಯುವಕನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದಾರೆ.

Leave A Reply

Your email address will not be published.