ಬೆಳ್ತಂಗಡಿ ತಾಲೂಕಿನ ಲಾಯಿಲ ಸಮೀಪ ರಿಕ್ಷಾ ಅಪಘಾತದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಮೃತ್ಯು

ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಲಾಯಿಲ ಸಮೀಪ ರಿಕ್ಷಾ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.

ಲಾಯಿಲದ ಪುತ್ರಬೈಲು ಸಮೀಪ ರಿಕ್ಷಾ ಚಾಲಕ ಪ್ರಮೋದ್ ಭೈರ ಅವರೇ ಅಂದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯಾಗಿದ್ದು, ಇವತ್ತು ತೀರಿಕೊಂಡವರು. ನಿನ್ನೆ ರಾತ್ರಿ ಅವರಿಗೆ ಮಂಗಳೂರಿನ ಮಂಗಳಾ ಆಸ್ಪತ್ರೆಯಲ್ಲಿ ಆಪರೇಶನ್ ನಡೆದಿತ್ತು. ಆದರೆ ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅವರು ತೀರಿಕೊಂಡಿದ್ದಾರೆ.

ಅಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದು ನಾಲ್ವರು ಗಾಯಗೊಂಡ ಘಟನೆ ಎರಡು ವಾರಗಳ ಹಿಂದೆ, ಅಂದರೆ 10 ನೆಯ ಏಪ್ರಿಲ್ ನಂದು ಸಂಭವಿಸಿತ್ತು.


ರಿಕ್ಷಾದಲ್ಲಿದ್ದ ಇತರರಾದ ರಾಮಣ್ಣ ಪುತ್ರಬೈಲು, ವಸಂತ ರಾಣಿ, ರಾಮಪ್ಪ ಗಾಂಧೀನಗರ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರುಗಳು ಚೇತರಿಸಿಕೊಂಡಿದ್ದಾರೆ.

ಮೃತ ಪ್ರಮೋದ್ ಬೈರ ಅವರ ಹತ್ತಿರದ ಕುಟುಂಬಸ್ಥರು ಮಡಿಕೇರಿಯಲ್ಲಿದ್ದ ವೀಕೆಂಡ್ ಲಾಕ್ದೊಳ್ ಸಂದರ್ಭದಲ್ಲಿ ಬೆಳ್ತಂಗಡಿ ತಲುಪಲು ಕಷ್ಟಪಡುತ್ತಿದ್ದಾರೆ.

Leave A Reply

Your email address will not be published.