ಮಾಣಿಯಲ್ಲಿ ಬೈಕ್ ಅಪಘಾತ : ಕ್ಷಯ ನಿಯಂತ್ರಣ ಆರೋಗ್ಯ ನಿರೀಕ್ಷಕ ವೆಂಕಟೇಶ್ ಉದ್ಧಾರ್ ಮೃತ್ಯು

ಮಾಣಿಯಲ್ಲಿ ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಪುತ್ತೂರು ಮುಂಡೂರು ನಿವಾಸಿ ಮಂಗಳೂರು ಕ್ಷಯ ನಿಯಂತ್ರಣ ಅಧಿಕಾರಿ ವಿಭಾಗದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್ ಉದ್ಧಾರ್ ಅವರು ಎ.28ರಂದು ಬೆಳಿಗ್ಗೆ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ದಾರವಾಡ ಮೂಲದವರಾದ ವೆಂಕಟೇಶ್ ಉದ್ಧಾರ್ ಅವರು ಮುಂಡೂರಿನಲ್ಲಿ ವಾಸ್ತವ್ಯ ಹೊಂದಿದ್ದು, 1998ರಲ್ಲಿ ಪುತ್ತೂರು ಆರೋಗ್ಯ ಇಲಾಖೆಯಲ್ಲಿ ಸೇವೆಯನ್ನು ಆರಂಭಿಸಿ ಆರಂಭದಲ್ಲಿ ಕುಷ್ಟ ರೋಗ ನಿಯಂತ್ರಣ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಬಳಿಕ ಅವರು ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಬಳಿಕ ಪದ್ದೋನತಿ ಹೊಂದಿ ಮಂಗಳೂರು ಜಿಲ್ಲಾ ಕ್ಷಯ ನಿಯಂತ್ರಣ ವಿಭಾಗದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಅವರು ಪ್ರತಿ ನಿತ್ಯ ಮಂಗಳೂರಿಗೆ ಹೋಗಿ ಬರುತ್ತಿದ್ದು, ಎ.26ರಂದು ಮಂಗಳೂರಿನಿಂದ ಪುತ್ತೂರಿಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮಾಣಿ ಸಮೀಪ ಅವರ ಬೈಕ್ ಅಪಘಾತಗೊಂಡಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಅವರು ಎ.28ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

Leave A Reply

Your email address will not be published.