ದ‌.ಕ.ಅಡಿಷನಲ್ ಎಸ್ಪಿಯಾಗಿ ಭಾಸ್ಕರ್ ಒಕ್ಕಲಿಗ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ಒಕ್ಕಲಿಗ ರವರು ಅಧಿಕಾರ ಸ್ವೀಕರಿಸಿದ್ದಾರೆ.

ಭಾಸ್ಕರ್ ಒಕ್ಕಲಿಗ ಅವರು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ, ಮತ್ತು ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

ನಂತರ ಸಹಾಯಕ ಪೊಲೀಸ್ ಕಮೀಷನರ್ ಆಗಿ ಮಂಗಳೂರು ಕೇಂದ್ರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದು,ಬಳಿಕ ವರ್ಗಾವಣೆಗೊಂಡು ಮೂರು ಜಿಲ್ಲೆಯ ಲೋಕಾಯುಕ್ತ ಎಸ್ಪಿಯಾಗಿ(ಪ್ರಭಾರ) ವಾಗಿ ಕರ್ತವ್ಯ ನಿರ್ವಹಿಸಿದರು.

ಇದೀಗ ಎಸ್ಪಿಯಾಗಿ ಪದೋನ್ನತಿ ಹೊಂದಿದ್ದು, ಆಂತರಿಕ ಭದ್ರತಾ ದಳದ ಎಸ್ಪಿಯಾಗಿ ವರ್ಗಾವಣೆ ಆದೇಶದಲ್ಲಿದ್ದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Leave A Reply

Your email address will not be published.