ನಾಪತ್ತೆಯಾಗಿದ್ದ ಯಕ್ಷ ಕಲಾವಿದ ಕಡಬಾಳ ಉದಯ ಹೆಗಡೆ ಬೆಂಗಳೂರಿನಲ್ಲಿ ಪತ್ತೆ

Share the Article

ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಎ.21ರಂದು ನಾಪತ್ತೆಯಾಗಿದ್ದು ಇದೀಗ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲದಿಂದ ತಿಳಿದು ಬಂದಿದೆ.

ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿ  ಸ್ವ ನಗರದಲ್ಲಿ ವಾಸವಾಗಿದ್ದ ಹೆಗಡೆಯವರು ಎ.21 ರಂದು ಸಂಜೆ ಸುಮಾರು 6ಗಂಟೆಗೆ ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದರು.
ಯಕ್ಷಗಾನ ಪ್ರದರ್ಶನಕ್ಕೆಂದು ಮನೆಯಿಂದ ತೆರಳಿದವರು ಮತ್ತೆ ವಾಪಸಾಗಿರಲಿಲ್ಲ. ಅಲ್ಲದೆ ಅವರ ಮೊಬೈಲ್  ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಮನೆಯಿಂದ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗಿರಲಿಲ್ಲ.

ಈ ಬಗ್ಗೆ ಕಡಬಾಳರ ಪತ್ನಿ, ಸ್ವತಃ ಯಕ್ಷ ಕಲಾವಿದೆ ಅಶ್ವಿನಿ ಹೆಗಡೆಯವರು ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆಗಿಳಿದ ಪೊಲೀಸರು ಉದಯ ಹೆಗಡೆಯವರು ಬೆಂಗಳೂರಿನ ಸಂಬಂಧಿಯ ಮನೆಯಲ್ಲಿ ವಾಸವಿರುವುದನ್ನು ಪತ್ತೆ ಹಚ್ಚಿದ್ದಾರೆ.

ಮನೆಯಲ್ಲಿ ಹೇಳದೆ ಕೇಳದೆ ಹೀಗೆ ಮನೆಬಿಟ್ಟು ನಾಪತ್ತೆಯಾದ ಕಾರಣ ಹೆಚ್ಚಿನ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಿದೆ.

Leave A Reply

Your email address will not be published.