ತನ್ನ ಗರ್ಭಿಣಿ ಪತ್ನಿ, ಮತ್ತು ಇಬ್ಬರು ಎಳೆಯ ಮಕ್ಕಳನ್ನು ರಾಡ್ ಬೀಸಿ ಕೊಂದ ಕಿರಾತಕ ಅಪ್ಪ !

ರಾತ್ರಿ ಕುಡಿದ ಮತ್ತಿನಲ್ಲಿ ತನ್ನ ತಿಂಗಳು ತುಂಬಿದ ಗರ್ಭಿಣಿ ಪತ್ನಿ ಮತ್ತು ಎರಡು ಎಳಸು ಮಕ್ಕಳನ್ನೂ ಸೇರಿ ಮನೆಯಲ್ಲಿ ಒಟ್ಟು ನಾಲ್ವರನ್ನು ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ.

ಕೊಲೆಗಾರನನ್ನು ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಚಾಮೇಗೌಡನ ಹುಂಡಿಯಲ್ಲಿ ಮಣಿಕಂಠಸ್ವಾಮಿ ಎಂದು ಗುರುತಿಸಲಾಗಿದ್ದು, ಈತ ತನ್ನ ಅತ್ತೆ ಸೇರಿದಂತೆ ಕುಟುಂಬದ ನಾಲ್ವರನ್ನು ಬುಧವಾರ ತಡರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಮೃತರನ್ನು ಅತ್ತೆ ಕೆಂಪಾಜಮ್ಮ (60), ಗರ್ಭಿಣಿ ಪತ್ನಿ ಗಂಗಾ(28), ಪುತ್ರರಾದ ರೋಹಿತ್ (4) ಮತ್ತು ಸಾಮ್ರಾಟ್ (4) ಎಂದು ಗುರುತಿಸಲಾಗಿದೆ.

ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಕಂಠಸ್ವಾಮಿಗೆ ಕುಡಿತದ ಚಟ ಇತ್ತು. ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಈತ, ರಾತ್ರಿ ಮತ್ತೆ ಒಳಕ್ಕೆ ಮದ್ಯ ಕುಡಿದಿದ್ದ. 

ನಿನ್ನೆ ಕುಡಿದ ಅಮಲಿನಲ್ಲಿ ಗರ್ಭಿಣಿ ಹೆಂಡತಿ, ಅತ್ತೆ, ಇಬ್ಬರು ಮಕ್ಕಳ ತಲೆಯನ್ನು ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿ ನಾಲ್ವರು ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.

ಆನಂತರ ಆರೋಪಿ ಮಣಿಕಂಠಸ್ವಾಮಿ ತಲೆ ಮರೆಸಿಕೊಂಡಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸರಗೂರು ಪಿಎಸ್‌ಐ ದಿವ್ಯಾ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.