ಆರೋಗ್ಯ ಸಚಿವರ ವಜಾ ಮಾಡಿದ ಮುಖ್ಯಮಂತ್ರಿ

ಮಹತ್ವದ ಬೆಳವಣಿಗೆಯೊಂದರಲ್ಲಿ ತೆಲಂಗಾಣದ ಆರೋಗ್ಯ ಸಚಿವ ಎಟಲಾ ರಾಜೇಂದ್ರ ಅವರನ್ನು ವಜಾ ಮಾಡಲಾಗಿದೆ.

ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ತಮ್ಮ ಸಚಿವ ಸಂಪುಟದಿಂದ ಆರೋಗ್ಯ ಸಚಿವ ಎಟಲಾ ರಾಜೇಂದ್ರ ಅವರನ್ನು ವಜಾ ಮಾಡಿದ್ದಾರೆ.

ಆದರೆ ಆರೋಗ್ಯ ಸಚಿವರ ವಜಾಕ್ಕೂ ಕೊರೋನಾ ಪರಿಸ್ಥಿತಿಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿದುಬಂದಿದೆ.
ಇತ್ತೀಚೆಗೆ ನಡೆದ ಭೂ ಅತಿಕ್ರಮಣ ಪ್ರಕರಣದಲ್ಲಿ ಸಚಿವ ರಾಜೇಂದ್ರ ಅವರ ಹೆಸರು ಕೇಳಿಬಂದಿತ್ತು. ಈ ಕುರಿತಂತೆ ತನಿಖೆಗೆ ಸಮಿತಿ ಕೂಡ ರಚಿಸಲಾಗಿತ್ತು. ಇದೇ ಆರೋಪಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರನ್ನು ವಜಾ ಮಾಡಲಾಗಿದೆ ಎಂದು ವರದಿಯಾಗಿದೆ.

Leave A Reply

Your email address will not be published.