ಬೆಳ್ತಂಗಡಿಯ ಉದ್ಯಮಿಯನ್ನು ಶಿರಸಿಯಲ್ಲಿ ಕೊಲೆ | ಮೂವರ ಬಂಧನ, ಇನ್ನಿಬ್ಬರಿಗೆ ಶೋಧ

ರಿಯಲ್ ಎಸ್ಟೇಟ್ ಹಾಗೂ ಫ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿ
ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ತೋಟತ್ತಾಡಿ ಸನಿಹದ ಬೆಂದ್ರಾಳ ನಿವಾಸಿ ಸುದರ್ಶನ್ ಅಲಿಯಾಸ್ ಹರ್ಷ(36) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಬಂಧಿಸಲಾಗಿದೆ.

ಸುದರ್ಶನ್ ಅಲಿಯಾಸ್ ಹರ್ಷ ಅವರನ್ನು ಶಿರಸಿ ಬಳಿ ಅಪಘಾತ ಮಾಡಿ ಬಳಿಕ ತಲ್ವಾರ್ ನಿಂದ ಹೊಡೆದು ಕೊಲೆ ಮಾಡಲಾಗಿತ್ತು.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿ ಪರಾರಿಯಾಗಿತ್ತು.

ಬೈಕ್ ನಲ್ಲಿ ಹರ್ಷ ಪ್ರಯಾಣಿಸುತ್ತಿದ್ದ ವೇಳೆ ಅವರಿದ್ದ ಬೈಕ್ ಗೆ ಕಾರಿನಲ್ಲಿ ಬಂದ ತಂಡ ಕಾರಿನಿಂದ ಡಿಕ್ಕಿ ಹೊಡೆಸಿ ರಸ್ತೆಗೆ ಬೀಳಿಸಿ ಮಚ್ಚಿನಿಂದ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿತ್ತು.

ಉ.ಕ.ದ ಮುಂಡಗೋಡ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಅಧೀಕ್ಷಕರಾದ ಶಿವಪ್ರಕಾಶ ದೇವರಾಜು ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿ ಪ್ರಭುಗೌಡ ಡಿ.ಕೆ ಪಿ.ಐ ಮುಂಡಗೋಡ ಹಾಗೂ ತಂಡವು ಆರೋಪಿಗಳಾದ ಮಂಜುನಾಥ, ಕಿರಣ ಮಲ್ಲಿಕಜಾನ್ ನನ್ನು ಬಂಧಿಸಿದ್ದಾರೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ ಎಸ್ಕ್ರಾಸ್ ಕಾರು, ಕೊಲೆ ಮಾಡಲು ಬಳಸಿದ ಕಬ್ಬಿಣದ ಪೈಪಿನಂತಿರುವ ರಾಡ್ ಹಾಗೂ ಚಾಕುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳಾದ ಶಬ್ಬೀರ್ ಹಾಗೂ ಹಜರತ್ಲಿ ಎಂಬವರು ತಲೆ ಮರೆಸಿಕೊಂಡಿದ್ದು ಅವರ ಪತ್ತೆಗೆ ಪೊಲೀಸರು ಶೋಧ ಮುಂದುವರೆಸಿದ್ದಾರೆ.

Leave A Reply

Your email address will not be published.