ಪ್ರಧಾನಿ ಸೂಚಿಸಿದರೆ ಮತ್ತೊಮ್ಮೆ ಲಾಕ್ ಡೌನ್ – ಸಿಎಂ ಯಡಿಯೂರಪ್ಪ
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದರೆ ರಾಜ್ಯದಲ್ಲೂ ಮತ್ತೊಮ್ಮೆ ಲಾಕ್ ಡೌನ್ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 14 ದಿನಗಳ ಜನತಾ ಕರ್ಪ್ಯೂ ವಿಧಿಸಲಾಗಿದೆ. ಆದರೂ ರಾಜ್ಯದಲ್ಲಿ ಪ್ರತಿದಿನ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ. 12 ರಿಂದ ಮತ್ತೆ 14 ದಿನ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯುತ್ತಿದೆ. ಇಲ್ಲಿ ದೇಶದಲ್ಲಿ ಒಟ್ಟಾರೆ ಎಲ್ಲಾ ರಾಜ್ಯಗಳಲ್ಲೂ ಲಾಕ್ ಡೌನ್ ನಡೆಸಬೇಕಾ, ಅಥವಾ ಯಾವೆಲ್ಲ ರಾಜ್ಯಗಳಲ್ಲಿ ಅಗತ್ಯವಿದೆಯೋ ಅಲ್ಲಿ ಮಾತ್ರ ಲಾಕ್ ನಡೆಸುವುದಾ ಎಂದು ತೀರ್ಮಾನವಾಗಲಿದೆ. ಅಥವಾ ದೇಶದಲ್ಲಿ ಲಾಕ್ಡೌನ್ ಮಾಡದೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆಯ ಎಂಬ ಬಗ್ಗೆ ಇವತ್ತು ಕ್ಯಾಬಿನೆಟ್ ಮೀಟಿಂಗಿನಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ.