ಹೋಂ ಕ್ವಾರಂಟೈನ್ ನಲ್ಲಿದ್ದ ಬಾಲಕಿ ನೇಣಿಗೆ ಶರಣು

ಬೈಂದೂರು: ಹೋಂ ಕ್ವಾರಂಟೈನ್ ನಲ್ಲಿದ್ದ ಬಾಲಕಿ ನೇಣಿಗೆ ಶರಣಾದ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರದ ಕೊಡೇರಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ತನ್ವಿತಾ(12) ಮೃತಪಟ್ಟ ಬಾಲೆ. ಬಾಲಕಿಯ ಮನೆಯವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.

ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿದ್ದರು. ಎಲ್ಲರೊಂದಿಗೆ ಬೆರೆಯಲು, ಚಿಕ್ಕ‌ಮಗುವನ್ನು ಮುಟ್ಟಲು, ಹೊರಗೆ ಹೋಗಲು ಬಾಲಕಿಗೂ ನಿರ್ಬಂಧಿಸಲಾಗಿತ್ತು.ಇದರಿಂದ ಮನನೊಂದ ಮುಗ್ಧ ಬಾಲಕಿ ತನ್ವಿತಾ ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ‌ ಕುರಿತು ಪ್ರಕರಣ ದಾಖಲಾಗಿದೆ.

Leave A Reply

Your email address will not be published.