ಉಪ್ಪಿನಂಗಡಿಯಲ್ಲಿ ಖಾಸಗಿ ಸಂಸ್ಥೆಯಲ್ಲಿ ಕೆಲಸದಲ್ಲಿದ್ದ ಯುವತಿ ಆತ್ಮಹತ್ಯೆ

ಉಪ್ಪಿನಂಗಡಿಯಲ್ಲಿ ಯುವ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಂಭವಿಸಿದೆ.

ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಸತೀಶ್ ನಾಯಕ್ ಎಂಬವರ ಪತ್ನಿ ಮೈಥಿಲಿ (27) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಈ ಕೃತ್ಯ ನಡೆದಾಗ ಪತಿ ಮನೆಯಲ್ಲಿಯೇ ಇದ್ದರು. ಸಿಟ್ಟಿನ ಭರದಲ್ಲಿ ಆಕೆ ಬಾಗಿಲು ರೂಮಿನ ಬಾಗಿಲು ಹಾಕಿಕೊಂಡಿದ್ದರು.

ಗಂಡ ತಕ್ಷಣ ಬಾಗಿಲು ಒಡೆದು ಆಕೆಯನ್ನು ರಕ್ಷಿಸಲು ಮುಂದಾದರಾದರೂ, ಆಸ್ಪತ್ರೆಗೆ ಕರೆತರುವ ವೇಳೆ ಆಕೆ ಸಾವನ್ನಪ್ಪಿದ್ದಾಳೆಂದು ತಿಳಿಸಲಾಗಿದೆ.

ಉಪ್ಪಿನಂಗಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.