ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಡಾ.ಪ್ರಜ್ಞಾ ಅಮ್ಮೆಂಬಳ ನೇಮಕ

ದ.ಕ.ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ.ಪ್ರಜ್ಞಾ ಅಮ್ಮೆಂಬಳ ಅವರನ್ನು ನೇಮಿಸಲಾಗಿ ಸರಕಾರ ಆದೇಶ ಹೊರಡಿಸಿದೆ.

ಕೆಎ.ಎಸ್. ಹಿರಿಯ ಶ್ರೇಣಿ ಅಧಿಕಾರಿಯಾಗಿರುವ ಡಾ.ಪ್ರಜ್ಞಾ ಅಮ್ಮೆಂಬಳ ಅವರು
ದ.ಕ.ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ರೂಪ ಎಂ.ಜೆ.ಅವರಿಂದ ತೆರವಾದ ಸ್ಥಾನಕ್ಕೆ ನೇಮಕಗೊಂಡಿದ್ದಾರೆ.

ಪ್ರಜ್ಞಾ ಅಮ್ಮೆಂಬಳ ಅವರು ರಾಜ್ಯ ಮಾರ್ಜಕ ಹಾಗೂ ಸಾಬೂನು ನಿಗಮದ ಪ್ರಧಾನ ವ್ಯವಸ್ಥಾಪಕರಾಗಿದ್ದರು.ತಿಪಟೂರು ಉಪವಿಭಾಗದ ಸಹಾಯಕ ಕಮೀಷನರ್ ಆಗಿ ಉತ್ತಮ ಸೇವೆ ಸಲ್ಲಿಸಿದ್ದರು.

Leave A Reply

Your email address will not be published.