ಮುಂಜಾನೆಯ ಸಮಯದಲ್ಲಿ ಪೊಲೀಸ್ ಫೈರಿಂಗ್ | ಗಾಯಾಳು ಆಸ್ಪತ್ರೆಗೆ

ಬೆಳಬೆಳಗ್ಗೆ ಬೆಂಗಳೂರಿನಲ್ಲಿ ಪೊಲೀಸ್ ಫೈರಿಂಗ್ ನಡೆದಿದೆ. ರೌಡಿಶೀಟರ್ ಸೂರ್ಯ ಭೂಮಿ ಎಂಬಾತನ ಮೇಲೆ ಸಿಸಿಬಿ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಸೂರ್ಯನನ್ನು ಬಂಧಿಸಲು ಹೋದಾಗ ಸಿಸಿಬಿ ಹೆಡ್ ಕಾನ್ಸ್ ಟೇಬಲ್ ಹನುಮೇಶ್ ಮೇಲೆ ಹಲ್ಲೆ ನಡೆಸಲು ಆತ ಯತ್ನಿಸಿದ್ದ. ಈ ವೇಳೆ ಆತ್ಮರಕ್ಷಣೆಗಾಗಿ ಸಿಸಿಬಿ ಎಸಿಪಿ ಪರಮೇಶ್ವರ್ ಅವರು ಫೈರ್ ಓಪನ್ ಮಾಡಿದ್ದಾರೆ.

ಈತನ ವಿರುದ್ಧ ಹಲವು ತಾನೆಗಳಲ್ಲಿ ಪ್ರಕರಣ ದಾಖಲಾಗಿವೆ. ರಾಮಮೂರ್ತಿ ನಗರ ಠಾಣೆಯಲ್ಲಿ ಕೊಲೆ ಪ್ರಕರಣ 2015 ರಲ್ಲಿ ದಾಖಲಾಗಿತ್ತು. ಬಳಿಕ 2016 ರಲ್ಲಿಯೂ ಮತ್ತೊಂದು ಕೊಲೆ ಕೇಸ್ ಈತನ ವಿರುದ್ಧ ದಾಖಲಾಗಿತ್ತು. ಇದಲ್ಲದೆ ಕೆ.ಜಿ. ಹಳ್ಳಿ ಠಾಣೆಯಲ್ಲಿ 307 ಸೇರಿದಂತೆ ಎರಡು ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲು ತೆರಳಿದಾಗ ಫೈರಿಂಗ್ ಆಗಿದೆ. ಗಾಯಾಳು ರೌಡಿಶೀಟರ್ ನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Leave A Reply

Your email address will not be published.