ಅಕ್ರಮವಾಗಿ ನಾಡಕೋವಿ ತಯಾರಿಕೆ ಪ್ರಕರಣ : ಪಾಲ್ತಾಡಿನ ವ್ಯಕ್ತಿಯ ಬಂಧನ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ನಾಡಕೋವಿ ತಯಾರಿಕೆದಾರ ಮತ್ತು ಅದನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವನನ್ನು ಬುಧವಾರ ಬಂಧಿಸಲಾಗಿದೆ.

ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ನವೀನ್‌ಚಂದ್ರಜೋಗಿ ಮತ್ತು ಸುಬ್ರಹ್ಮಣ್ಯ ಎಸ್ ಐ ಓಮನ ಅವರ ನೇತೃತ್ವದ ತಂಡ ಇಂದು ಕೊಳ್ತಿಗೆ ಗ್ರಾಮದ ಪಾಲ್ತಾಡು ನಿವಾಸಿ ಲೋಹಿತ್ ಬಂಗೇರ ಎಂಬವರನ್ನು ಬಂಧಿಸಿದ್ದು ಅವರಲ್ಲಿ ಇದ್ದ ಒಂದು ಕೋವಿಯನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Leave A Reply

Your email address will not be published.