ಕೊರೊನಾಕ್ಕೆ ಕಡಬ ಮೂಲದ ಯುವಕ ಬಲಿ | ಪೊಲೀಸ್ ಅಧಿಕಾರಿಯ ಪುತ್ರ ಬಲಿಯಾದ ದುರ್ದೈವಿ

Share the Article

ಕೊರೋನಾ ಸೋಂಕಿಗೆ ತುತ್ತಾಗಿ ಕಡಬ ಮೂಲದ 36 ವರ್ಷದ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ.

ಮೂಲತಃ ಕಡಬ ನಿವಾಸಿಯಾಗಿದ್ದು, ಪ್ರಸ್ತುತ ಬಂಟ್ವಾಳದಲ್ಲಿ ವಾಸಿಸುತ್ತಿರುವ ಪೊಲೀಸ್ ಅಧಿಕಾರಿಯೋರ್ವರ 36 ವರ್ಷದ ಪುತ್ರನಿಗೆ ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯ ಕಾಡಿತ್ತು ಎನ್ನಲಾಗಿದೆ. ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರದಂದು ಮೃತಪಟ್ಟಿದ್ದಾರೆ‌.

ಉಪ್ಪಿನಂಗಡಿ ಠಾಣೆಯಲ್ಲಿ ಎಎಸೈ ಆಗಿ ಕರ್ತವ್ಯ ನಿರ್ವಹಿಸಿ ಏಪ್ರಿಲ್ 30ರಂದು ಸೇವಾ ನಿವೃತ್ತಿ ಹೊಂದಿದ ಯೋಗೀಂದ್ರ ರವರ ಮೊದಲ ಪುತ್ರ ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಕೊರೋನಾ ಸೋಂಕಿಗೆ‌ ತುತ್ತಾಗಿ ಮಂಗಳೂರಿನ ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಈ ದಿನ ಬೆಳಗ್ಗೆ ಮೃತಪಟ್ಟಿದ್ದಾರೆ.

Leave A Reply

Your email address will not be published.