ಎಸ್ ಡಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿ ಕೋವಿಡ್ ಗೆ ಬಲಿ

ಎಸ್ ಡಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿ ಚಿಕ್ಕಮಗಳೂರಿನ ಮೂಡಿಗೆರೆಯ ಮತ್ತಿಕಟ್ಟೆ ಮೂಲದ ಮೇಘರಾಜ್ (31) ವೆಂಟಿಲೇಟರ್ ಸಿಗದೇ ಸಾವನ್ನಪ್ಪಿದ್ದಾರೆ

ಕೊರೊನಾ ಸೋಂಕಿಗೆ ತುತ್ತಾಗಿದ್ದ ಮೇಘರಾಜ್ ಚಿಕ್ಕಮಗಳೂರಿನ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯ ಜನರಲ್ ವಾರ್ಡ್ ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಅವರಿಗೆ ಸೂಕ್ತ ಸಮಯದಲ್ಲಿ ಅವವೆಂಟಿಲೇಟರ್ ಸಿಗದೇ ಅವರು ಸಾವನ್ನಪ್ಪಿದ್ದಾರೆ.

ಮೇಘರಾಜ್ ಪೋಷಕರು ಅವರನ್ನು ಐಸಿಯುಗೆ ಶಿಫ್ಟ್ ಮಾಡುವಂತೆ ಆಸ್ಪತ್ರೆ ಸಿಬ್ಬಂದಿ ಬಳಿ ಪರಿಪರಿಯಾಗಿ ಬೇಡಿಕೊಂಡರೂ ಅವರಿಗೆ ಯಾರೂ ಸ್ಪಂದಿಸಿಲ್ಲ ಎನ್ನಲಾಗಿದೆ. ಆದರೆ ಕೊನೆ ಕ್ಷಣದವರೆಗೂ ಅವರನ್ನು ಐಸಿಯುಗೆ ಶಿಫ್ಟ್ ಮಾಡದೆ, ಕಾಲಹರಣ ಮಾಡಿದ್ದಾರೆ ಎನ್ನಲಾಗಿದೆ. ಸೂಕ್ತ ಚಿಕಿತ್ಸೆ ಸಿಗದೇ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.