ಉಪ್ಪಿನಂಗಡಿ | ಮಾನಸಿಕ ಅಸ್ವ ಸ್ಥೆಯನ್ನು ಗರ್ಭಿಣಿ ಮಾಡಿ ಓಡಿ ಹೋದ, ಕೇಸು ದಾಖಲು

ಮಾನಸಿಕ ಅಸ್ವಸ್ಥೆಯೋರ್ವರ ಮೇಲೆ ಅತ್ಯಾಚಾರ ನಡೆಸಿ, ಅವರನ್ನು ಗರ್ಭಿಣಿಯಾಗಿಸಿರುವ ಪ್ರಕರಣವೊಂದು ಉಪ್ಪಿನಂಗಡಿಯಲ್ಲಿ ನಡೆದಿದ್ದು ಈ ಸಂಬಂಧ ಆಕೆಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಉಪ್ಪಿನಂಗಡಿಯ ನೆಕ್ಕಿಲಾಡಿಯ ಭೀತಲಪ್ಪು ಪಕ್ಕ ಬಾಡಿಗೆ ಮನೆಯೊಂದರಲ್ಲಿ ತಾಯಿ ಮತ್ತು ಮಗಳು ಕಳೆದ ಒಂದು ವರ್ಷದಿಂದ ವಾಸ್ತವ್ಯವಿದ್ದರು.
ಇವರ 44ರ ಹರೆಯದ ಮಗಳು ವಿವಾಹಿತ ಮಾನಸಿಕ ಅಸ್ವಸ್ಥೆಯಾಗಿದ್ದು, ಇವರ ಪತಿ ಗುಜರಾತ್‌ನಲ್ಲಿದ್ದಾರೆ. ಮೂಲತಃ ಪುತ್ತೂರು ತಾಲೂಕು ನರಿಮೊಗರು ಮೂಲದವರಾಗಿರುವ ಆಕೆಯ ಪತಿ ಕಳೆದ 10 ತಿಂಗಳ ಹಿಂದೆ ಪತಿ ಕೆಲಸದ ನಿಮಿತ್ತ ಗುಜರಾತ್‌ಗೆ ತೆರಳಿದ್ದರು. ಆ ಬಳಿಕ ಇಲ್ಲಿಗೆ ಬಂದಿರಲಿಲ್ಲ.

ಕಳೆದ ಮೇ 12ರಂದು ಇವರ ಮನೆಗೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ರೂಟೀನ್ ಭೇಟಿ ನೀಡಿದ್ದರು. ಈ ಸಂದರ್ಭ ಸಂಶಯ ಬಂದ ಸಿಬ್ಬಂದಿ ಅವರನ್ನು ಸ್ಕ್ಯಾನಿಂಗ್ ಮಾಡಿಸಲು ತಿಳಿಸಿದಾಗ ಈಕೆ ಏಳು ತಿಂಗಳ ಗರ್ಭಿಣಿಯೆಂದು ತಿಳಿದು ಬಂದಿದೆ.

ನಂತರ ಹಿತೈಷಿಗಳ ಮತ್ತು ಸಿಬ್ಬಂದಿಗಳ ಸಲಹೆಯ ಮೇರೆಗೆ ಈಕೆಯ ತಾಯಿ ನಿನ್ನೆ ಮೇ 15ರಂದು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.
ದೂರಿನಲ್ಲಿ ತನ್ನ ಮಗಳ ಮೇಲೆ ದರ್ಬೆ ಸುರೇಶ್ ಪ್ರಭು ಎಂಬಾತ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವುದಾಗಿ ಆಕೆ ಆರೋಪಿಸಿದ್ದಾರೆ. ಈಗ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ತಲೆ ಮರೆಸಿಕೊಂಡ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

Leave A Reply

Your email address will not be published.