ಬೆಳ್ತಂಗಡಿ ಮೂಲದ, ಬೆಂಗಳೂರಿನ ವಕೀಲ ಕೊರೋನಾ ವ್ಯಾಧಿಗೆ ವಿಧಿವಶ

ಮೂಲತಃ ನಾವೂರಿನ ಸದ್ಯ ಬೆಂಗಳೂರಿನಲ್ಲಿ ನ್ಯಾಯವಾದಿಯಾಗಿರುವ ರಮೇಶ್ ಪಿ.ಎನ್ ರವರು ಕೊರೊನಾ ಸಾಂಕ್ರಾಮಿಕ ರೋಗದಿಂದ ಬಳಲಿ ಮೇ.17 ರಂದು ಮೃತಪಟ್ಟಿದ್ದಾರೆ.

ಮೃತರು ನಾವೂರಿನ ಇಂಚರ ಮನೆ ನಿವಾಸಿ ನೇಮಣ್ಣ ಮೂಲ್ಯ ರವರ ಪುತ್ರರಾಗಿದ್ದಾರೆ. ಅವರು ಬೆಂಗಳೂರಿನಲ್ಲಿ ವಕೀಲ ವೃತ್ತಿಯನ್ನು ನಡೆಸುತ್ತಿದ್ದರು. ಇವರಿಗೆ ಇತ್ತೀಚೆಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಪರೀಕ್ಷೆಯ ವೇಳೆ ಕೊರೊನಾ ಸೋಂಕು ಧೃಢಪಟ್ಟಿತ್ತು. ಇವರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು, ಮೇ.17 ರಂದು ಕೊನೆಯುಸಿರೆಳೆದಿದ್ದಾರೆ.

ಮೃತರು ತಂದೆ ನೇಮಣ್ಣ ಮೂಲ್ಯ, ತಾಯಿ ಕಲ್ಯಾಣಿ, ಬೆಂಗಳೂರಿನಲ್ಲಿ ನ್ಯಾಯವಾದಿಯಾಗಿರುವ ಪತ್ನಿ ಶೈಲಾ, ಇಬ್ಬರು ಪುತ್ರರು, ಸಹೋದರ, ಸಹೋದರಿಯರು ಹಾಗೂ ಬಂಧುವರ್ಗದವರನ್ನು ಹಾಗೂ ಅಪಾರ ಸಂಖ್ಯೆಯ ಸಹೋದ್ಯೋಗಿಗಳನ್ನು ಅಗಲಿದ್ದಾರೆ.

Leave A Reply

Your email address will not be published.