ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದ ಪುತ್ತೂರಿನ ನವ ವಿವಾಹಿತ ಅನಾರೋಗ್ಯದಿಂದ ಮೃತ್ಯು

ಬೆಂಗಳೂರಿನಲ್ಲಿ ಮೊಬೈಲ್ ಶಾಪ್ ಹೊಂದಿರುವ ಪುತ್ತೂರಿನ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಕುಂಬ್ರದಲ್ಲಿ ಅಡಿಕೆ ವ್ಯಾಪಾರಿಯಾಗಿರುವ ಅಬ್ದುಲ್ ಅಝೀಝ್ ಕಿನ್ನಿಜಾಲು ಅವರ ಪುತ್ರ ಅಶ್ರಪ್ ಎಂಬವರೇ ಮೃತಪಟ್ಟ ಯುವಕ.

ಅಶ್ರಫ್ ಅವರು ಬೆಂಗಳೂರಿನಲ್ಲಿ ಮೊಬೈಲ್ ಶಾಪ್ ಹೊಂದಿದ್ದರು. ಒಂದೂವರೆ ತಿಂಗಳ ಹಿಂದೆಯಷ್ಟೇ ಅವರ ವಿವಾಹ ನಡೆದಿತ್ತು.ಕೆಲದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಬೆಳಿಗ್ಗೆ ಮೃತಪಟ್ಟರು ಎನ್ನಲಾಗಿದೆ.

Leave A Reply

Your email address will not be published.