ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿದ ಮರ | ಸವಾರ ಗಂಭೀರ

ಚಲಿಸುತ್ತಿದ್ದ ಬೈಕ್ ಗಳ‌ ಮೇಲೆ ಮರ ಉರುಳಿ ಬಿದ್ದು, ಓರ್ವ ಸವಾರ ಗಂಭೀರ ಗಾಯಗೊಂಡು, ಮತ್ತೋರ್ವನಿಗೆ ಸಣ್ಣ-ಪುಟ್ಟ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಕೊಡಚಾದ್ರಿ ಕಾಲೇಜು ಎದುರು ಸೋಮವಾರ ನಡೆದಿದೆ.

ಭಾರಿ ಗಾಳಿ-ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಪರಿಣಾಮ ಮಾವಿನಕೊಪ್ಪ ಬಡಾವಣೆಯ ಸಾಧಿಕ್ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಈತ ಬೈಕ್ ನಲ್ಲಿ ತೆರಳುವಾಗ ಮರ ಬಿದ್ದಿದೆ. ಚಿಕಿತ್ಸೆಗಾಗಿ ಈತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೋರ್ವ ಬೈಕ್ ಸವಾರ ಪ್ರತೀಕ್ ಹಾಗೂ ನಡೆದುಕೊಂಡು ಹೋಗುತ್ತಿದ್ದ ಋತ್ವಿಕ್ ಎಂಬುವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

Leave A Reply

Your email address will not be published.