ಕರಾಯ : ಮನೆಗೆ ನುಗ್ಗಿ ನಗ-ನಗದು ಕಳವು

ಉಪ್ಪಿನಂಗಡಿ ಠಾಣಾ ವ್ಯಾಪ್ತಿಗೆ ಬರುವ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಮುರಿಯಾಳ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು, ಐದು ಪವನ್ ಚಿನ್ನ ಹಾಗೂ ನಗದು ಕಳವುಗೈದು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.

ಮನೆ ಮಾಲಕಿ ಶಾಹಿದಾ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮನೆ ಮಾಲಕಿ ಶಾಹಿದಾ ಕಳೆದ ನಾಲ್ಕು ದಿನಗಳ ಹಿಂದೆ ತಮ್ಮ ತವರು ಮನೆಗೆ ಹೋಗಿದ್ದು, ಹಿಂದೆ ಬಂದು ನೋಡುವಾಗ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಪುತ್ತೂರು ಡಿವೈಎಸ್‌ಪಿ ಗಾನ ಪಿ.ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave A Reply

Your email address will not be published.