ವಿಟ್ಲಮುಡ್ನೂರಿನಲ್ಲಿ ಸಿಡಿಲು ಬಡಿದು ಇಬ್ಬರಿಗೆ ಗಾಯ

ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ವಿಟ್ಲಮುಡ್ನೂರು ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.

ವಿಟ್ಲಮುಡ್ನೂರು ಗ್ರಾಮದ ಪೈಸಾರಿ ನಿವಾಸಿಗಳಾದ ರಮಾವತಿ, ಶ್ಯಾಮಲ ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಗೋಪಾಲಕೃಷ್ಣ ನಾಯಕ್ ಅವರ ಮನೆಗೆ ಸಿಡಿಲು ಬಡಿದಿತ್ತು. ಮನೆಯ ಮೇಲ್ಛಾವಣಿ ಕುಸಿದು ಸುಮಾರು ರೂ.50 ಸಾವಿರ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಗ್ರಾಮಕರಣಿಕ ಕರಿಬಸಪ್ಪ, ಸಹಾಯಕ ರುಕ್ಮಯ ಭೇಟಿ ನೀಡಿದ್ದಾರೆ

Leave A Reply

Your email address will not be published.