ಪುತ್ತೂರು ಸರಕಾರಿ ಆಸ್ಪತ್ರೆಗೆ 1 ಕೋಟಿ ರೂ. ಅನುದಾನದಲ್ಲಿ ಆಕ್ಸಿಜನ್ ಪ್ಲಾಂಟ್ | ಇಂದು ಕಾಮಗಾರಿಗೆ ಶಿಲಾನ್ಯಾಸ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ರೂ. 1 ಕೋಟಿ ಅನುದಾನದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣಗೊಳ್ಳಲಿದೆ. ಇಂದು, ಮೇ19ಕ್ಕೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಇಂದು 10:15ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಆಕ್ಸಿಜನ್ ಪ್ಲಾಂಟ್‌ಗೆ ರೂ. 80 ಲಕ್ಷ ಅನುದಾನ ನೀಡಿದ ಕ್ಯಾಂಪ್ಕೋ ಸಂಸ್ಥೆ ಅಧ್ಯಕ್ಷರು, ಮ್ಯಾನೆಜಿಂಗ್ ಡೈರೆಕ್ಟರ್ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Leave A Reply

Your email address will not be published.