ವಿಷಜಂತು ಕಚ್ಚಿ ಮಹಿಳೆ ಮೃತ್ಯು | ಗದ್ದೆಯಲ್ಲಿ ಕೆಲಸ ಮಾಡುವಾಗ ನಡೆದ ಘಟನೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬ್ಯೆಲೂರು ಗ್ರಾಮದ ನೀರಗದ್ದೆಯಲ್ಲಿ ವಿಷದ ಹಾವು ಕಚ್ಚಿ ಮಹಿಳೆಯೊರ್ವಳು ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ.
ಮೃತ ಮಹಿಳೆಯನ್ನು ಜಾನಕಿ ರಮೇಶ ನಾಯ್ಕ (37) ಎಂದು ಗುರುತಿಸಲಾಗಿದೆ.

ಜಾನಕಿ ಅವರು ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಚ್ಚಿದ್ದು ತಕ್ಷಣ ಅವರನ್ನು ಮುರುಡೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಕಾರಣ ಆಕೆಯನ್ನು ಭಟ್ಕಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುವ ಮಾರ್ಗದ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

Leave A Reply

Your email address will not be published.