ಬೆಳ್ತಂಗಡಿ | ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಯುವಕ ಮೃತ್ಯು

ಎರಡು ದಿನಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಮೂಲದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಸುಲ್ಕೇರಿ ಅಣ್ಣಿ ಪೂಜಾರಿ ಎಂಬವರ ಪುತ್ರ ಪ್ರಸಾದ್(23) ಮೃತ ಯುವಕ.

ಪ್ರಸಾದ್ ಬೆಳ್ತಂಗಡಿ ಚರ್ಚ್ ರಸ್ತೆಯ ವಿಲ್ಸ್ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಿದ್ದರು. ಎರಡು ದಿನಗಳ ಹಿಂದೆ ತಮ್ಮ ಮನೆ ಸಮೀಪದ ಕಾಂಕ್ರೀಟ್ ರಸ್ತೆಯಲ್ಲಿ ಬೈಕ್ ನಲ್ಲಿ ಸಾಗುತ್ತಿದ್ದ ವೇಳೆ ಸ್ಕಿಡ್ ಆಗಿ ಈ ಘಟನೆ ಸಂಭವಿಸಿತ್ತು. ಎರಡು ದಿನ ಜೀವನ್ಮರಣ ಹೋರಾಟ ನಡೆಸಿದ ಪ್ರಸಾದ್ ಇಂದು ಇಹಲೋಕ ತ್ಯಜಿಸಿದರು.

Leave A Reply

Your email address will not be published.