ಲಾಕ್ ಡೌನ್ ನಲ್ಲಿ ಮನೆಯಲ್ಲಿ ಕೂತು ಬೋರ್ ಆಯಿತೆಂದು ಮೀನು ಹಿಡಿಯಲು ಹೋದ ಯುವಕರು ನೀರು ಪಾಲು

ಲಾಕ್‍ಡೌನ್ ನಲ್ಲಿ ಮನೆಯಲ್ಲೇ ಕೂತು ಬೇಸರ ಆಯಿತೆಂದು ಹೊತ್ತು ಕಳೆಯಲೆಂದು ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಅಂಕೋಲಾದ ಬೆಳಾಬಂದರ್ ನಿವಾಸಿ ಸಂದೀಪ ಬೀರಪ್ಪ ನಾಯ್ಕ (30), ಚೇತನ ನಾಗೇಶ ನಾಯ್ಕ (23) ನೀರುಪಾಲಾದವರಾಗಿದ್ದು, ಸಂದೀಪ ನಾಯ್ಕ ಮೃತ ದೇಹ ಪತ್ತೆಯಾಗಿದೆ. ನಾಪತ್ತೆಯಾದ ಇನ್ನೋರ್ವನಿಗಾಗಿ ಶೋಧ ನಡೆದಿದೆ.

ಲಾಕ್‍ಡೌನ್ ಹಿನ್ನೆಲೆ ಮನೆಯಲ್ಲಿದ್ದು ಅವರಿಬ್ಬರೂ ತುಂಬಾ ಬೇಸರಗೊಂಡಿದ್ದರು. ನಂತರ ಆ ಇಬ್ಬರು ಯುವಕರು ಮೀನು ಹಿಡಿಯಲೆಂದು ತಮ್ಮ ಮನೆಗೆ ಸಮೀಪವೇ ಇರುವ ಬಸಾಕಲ್ ಸಮೀಪ ಸಮುದ್ರಕ್ಕೆ ತೆರಳಿದ್ದರು. ಆದರೆ ಈ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.

ಈ ಬಗ್ಗೆ ಸ್ಪಷ್ಟ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಇನ್ನೊರ್ವನಿಗೆ ಹುಡುಕಾಟ ನಡೆಸಲಾಗುತ್ತಿದೆ.

Leave A Reply

Your email address will not be published.