ಹಾಡುಹಗಲೇ ಯುವಕನ ಕೊಲೆ..ಎರಡು ವಾರದ ಹಿಂದೆಯಷ್ಟೇ ಜೈಲಿಂದ ಬಿಡುಗಡೆಯಾಗಿದ್ದ ವ್ಯಕ್ತಿ

ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ವಲ್ಲಭಾಯ್ ರಸ್ತೆಯಲ್ಲಿ ನಡೆದಿದೆ.

ಭರತ್ ಕೊಲೆಯಾದ ರೌಡಿಶೀಟರ್. ಈತ ಎರಡು ವಾರದ ಹಿಂದೆ ಜೈಲಿನಿಂದ ಹೊರಬಂದಿದ್ದ. ಇಂದು ಹಾಸನ ಸಂತೆಪೇಟೆಯ 80 ಫೀಟ್ ರಸ್ತೆಯಲ್ಲಿ ಭರತ್​​ ಬೈಕ್​ನಲ್ಲಿ ತೆರಳುತ್ತಿದ್ದಾಗ ತೆಲೆಗೆ ಮಚ್ಚಿನಿಂದ ಕೊಚ್ಚಿ, ಬರ್ಬರ ಹತ್ಯೆ ಮಾಡಲಾಗಿದೆ.

ಈ ಕುರಿತು ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ. ಘಟನೆ ಹಿಂದೆ ವೈಷಮ್ಯದ ಕಾರಣ ಇರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

Leave A Reply

Your email address will not be published.