ಬೈಕ್ – ರಿಕ್ಷಾ ಅಪಘಾತ; ಗಾಯಾಳು ಸಾರಿಗೆ ಉದ್ಯಮಿ ಜೆ .ಎನ್. ಭಟ್ ಮೃತ್ಯು

ಉಡುಪಿ : ಕಾಪು ತಾಲೂಕಿಜ ಕುರ್ಕಾಲು-ಸುಭಾಶ್ ನಗರ ಬಳಿ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪಾಂಗಾಳ ಜೆ. ಎನ್. ಮೋಟಾರ್ಸ್ ನ ಮಾಲೀಕ ಹರಿದಾಸ್ ಭಟ್ (65) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತ ಪಟ್ಟಿದ್ದಾರೆ.

ಶನಿವಾರ ಬೆಳಗ್ಗೆ ಕುರ್ಕಾಲು ಸುಭಾಶ್ ನಗರ ಸಮೀಪದ ದ್ವಾರದ ಬಳಿ ಬೈಕ್‌ಗೆ ರಿಕ್ಷಾ ಡಿಕ್ಕಿ ಹೊಡೆದು ಹರಿದಾಸ್ ಭಟ್ ಅವರಿಗೆ ಗಂಭೀರ ಏಟಾಗಿತ್ತು. ತತ್‌ಕ್ಷಣ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಸುಮಾರು 45 ವರ್ಷಗಳಿಂದಲೂ ಸಾರಿಗೆ ಉದ್ಯಮ ನಡೆಸುತ್ತಿರುವ ಇವರು ದೇಶಾದ್ಯಂತ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದು, ಜೆ.ಎನ್. ಭಟ್ರು ಎಂದೇ ಪರಿಚಿತರಾಗಿದ್ದರು.

ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಸೇವಾ ಸಮಿತಿ, ಪಾಂಗಾಳ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಉಡುಪಿ ಜಿಲ್ಲಾ ಟೆಂಪೋ ಚಾಲಕರ ಮತ್ತು ಮಾಲೀಕರ ಸಂಘದ ಪದಾಧಿ ಕಾರಿಯಾಗಿಯೂ ಸೇವೆ ಸಲ್ಲಿಸಿದ್ದು, ಜನಾನುರಾಗಿಯಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Leave A Reply

Your email address will not be published.