ಕಡಬ ತಾಲೂಕು : ಪತ್ರಕರ್ತರ ಗ್ರಾಮ ವಾಸ್ತವ್ಯದ ಫಲಶ್ರುತಿ , ಶಿವರಾಮ ಅವರ ಮನೆಗೆ ಕೊನೆಗೂ ವಿದ್ಯುತ್ ಬೆಳಕು

ಕೊಂಬಾರಿನಲ್ಲಿ ನಡೆದ ಕಡಬ ತಾಲೂಕು ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ನಡೆದ ಪತ್ರಕರ್ತರ ಗ್ರಾಮವಾಸ್ತವ್ಯದಲ್ಲಿ ಬೇಡಿಕೆ ಸಲ್ಲಿಸಿದ ವ್ಯಕ್ತಿಯೊಬ್ಬರ ಮನೆಗೆ ಕೊನೆಗೂ ವಿದ್ಯುತ್ ಸಂಪರ್ಕ ಆಗಿದೆ.

ಕಡಬ ತಾಲೂಕು ಕೊಂಬಾರು ಗ್ರಾಮದ ಶಿವರಾಮ ಅವರು ತನ್ನ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದಿರುವ ಬಗ್ಗೆ ಮತ್ತು ಹಲವು ಸಮಯದಿಂದ ಬೇಡಿಕೆ ಸಲ್ಲಿಸಿದ್ದರೂ ಪ್ರಯೋಜನವಾಗದಿರುವ ಕುರಿತು ಕೊಂಬಾರಿನಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಿದ್ದರು.

ಈ ಬಗ್ಗೆ ಸ್ಪಂದಿಸಿದ ಜನಪರ ಕಾಳಜಿಯ ಅಧಿಕಾರಿ, ಕಡಬ ಮೆಸ್ಕಾಂ ಎಇಇ ಸಜಿಕುಮಾರ್ ಅವರು ಸಮಸ್ಯೆಯನ್ನು ಬಗೆಹರಿಸಿಕೊಟ್ಟಿದ್ದಾರೆ.

ವಿದ್ಯುತ್ ತಂತಿ ಎಳೆಯುವಲ್ಲಿ ಜಾಗದ ತಕರಾರು ಸೇರಿದಂತೆ ಬೇರೆ ಬೇರೆ ಕಾರಣಗಳಿಂದಾಗಿ ಇವರ ಮನೆಗೆ ವಿದ್ಯುತ್ ಸಂಪರ್ಕ ಸಾಧ್ಯವಾಗಿರಲಿಲ್ಲ. ಸಮಸ್ಯೆ ಬಗೆಹರಿಯಲು ವಿದ್ಯುತ್ ಲೈನ್ ಹಾದು ಹೋಗುವ ಜಮೀನಿನ ಮಾಲಕರುಗಳು ಮುಕ್ತ ಮನಸ್ಸಿನಿಂದ ಸಹಕರಿಸಿದ ಕಾರಣದಿಂದಾಗಿ ಸಮಸ್ಯೆ ಬಗೆಹರಿದಿದೆ.

ಮೆಸ್ಕಾಂ ವತಿಯಿಂದ 88 ಸಾವಿರ ರೂ. ವೆಚ್ಚದಲ್ಲಿ ಒಟ್ಟು 6 ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ.

Leave A Reply

Your email address will not be published.