ಬೆಳ್ತಂಗಡಿ | ಅಕ್ರಮ ಕಸಾಯಿಖಾನೆಗೆ ಪೊಲೀಸರ ದಿಢೀರ್ ದಾಳಿ, ಇಬ್ಬರ ಬಂಧನ

ಕಳೆಂಜ ಗ್ರಾಮದ ಕುಡುಪ್ಪಾರು ಎಂಬಲ್ಲಿ ರಬ್ಬರ್ ತೋಟದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಿಢೀರ್ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ 3 ಕ್ವಿಂಟಾಲ್ ದನದ ಮಾಂಸ ವಶಪಡಿಸಿಕೊಂಡ ಘಟನೆ ಮೇ.26 ರಂದು ನಡೆದಿದೆ.

ಕಳೆಂಜ ಗ್ರಾಮದ ಕುಡುಪ್ಪಾರು ನಿವಾಸಿ ಬೇಬಿ ಎಂಬವರಿಗೆ ಸೇರಿದ ರಬ್ಬರ್ ತೋಟದಲ್ಲಿ ಬೇಬಿ ಹಾಗೂ ಕೈರೋಡಿ ನಿವಾಸಿ ಸೆಬಾಸ್ಟಿಯನ್ ರವರ ಪುತ್ರ ಪ್ರಿನ್ಸ್ ಎಂಬವರು ಅಕ್ರಮವಾಗಿ ದನವನ್ನು ಕೊಂದು ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಕೂಡಲೇ ಕಾರ್ಯಪ್ರವೃತ್ತರಾದ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಪವನ್ ನಾಯಕ್ ಮತ್ತು ಸಿಬ್ಬಂದಿಗಳು, ಸ್ಥಳಕ್ಕೆ ದಾಳಿ ಮಾಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆಯೇ ಸುಮಾರು 3 ಕ್ವಿಂಟಾಲ್ ತೂಕದ ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ಗಣೇಶ್, ಕಳೆಂಜ ವಿಹಿಂಪ ಕಾರ್ಯದರ್ಶಿ ಉಮೇಶ್, ಕಳೆಂಜ ಬರಂಗದಳದ ಸಂಚಾಲಕ ರಾಜೇಶ್, ವಿಹಿಂಪ ಹಾಗೂ ಬಜರಂಗದಳದ ಕಾರ್ಯಕರ್ತರು ಆರೋಪಿಗಳನ್ನು ಹಿಡಿಯುವಲ್ಲಿ ಸಹಕರಿಸಿದ್ದಾರೆ.

Leave A Reply

Your email address will not be published.