ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ಮಾಸಿಕ 3500 ಆರ್ಥಿಕ ನೆರವು | ಉಚಿತ ಶಿಕ್ಷಣ ,ಉದ್ಯೋಗ,ಮದುವೆಗೆ ನೆರವು -ಸಿಎಂ. ಯಡಿಯೂರಪ್ಪ

ಕೋವಿಡ್‌ನಿಂದ ಅನೇಕ ಮಂದಿ ತಮ್ಮ ತಂದೆ ತಾಯಿಗಳನ್ನು ಕಳೆದುಕೊಂಡು ಅನಾಥರಾಗಿದ್ದಾರೆ.
ಇಂತಹ ಮಕ್ಕಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆರವು ಘೋಷಿಸುವ ಮೂಲಕ ಕೈಹಿಡಿಯುವ ಕೆಲಸ ಮಾಡಿದ್ದಾರೆ.

ಪೋಷಕರಿಬ್ಬರನ್ನೂ ಕಳೆದುಕೊಂಡ, ತಂದೆ ಅಥವಾ ‌ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಮಾಸಿಕ 3500ರೂ. ನೀಡುವುದಾಗಿ ಯಡಿಯೂರಪ್ಪ ಅವರು ಘೋಷಿಸಿದ್ದಾರೆ.

ಅಲ್ಲದೆ ಆ ಮಕ್ಕಳಿಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ
ನೆರವು, ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಉಚಿತ ಲ್ಯಾಪ್ ಟಾಪ್ , 21 ವರ್ಷ ತುಂಬಿದ ಹೆಣ್ಣುಮಕ್ಕಳ ಮದುವೆ, ಉದ್ಯೋಗಕ್ಕೆ 1ಲಕ್ಷರೂ ನೀಡುವುದಾಗಿ ಹೇಳಿದ್ದಾರೆ.

Leave A Reply

Your email address will not be published.