ಆಯತಪ್ಪಿ ಚರಂಡಿಗೆ ಬಿದ್ದು ಒಂದು ವರ್ಷದ ಮಗು ಮೃತ್ಯು

ಗೋಕಾಕ: ಚರಂಡಿಗೆ ಆಯತಪ್ಪಿ ಬಿದ್ದು ಒಂದು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಲೋಳಸೂರ ಗ್ರಾಮದಲ್ಲಿ ನಡೆದಿದೆ.

ಸಿದೀಕ್ ಸದ್ದಾಂ ತಹಶೀಲ್ದಾರ್ (೧) ಮೃತ ಮಗು. ಮನೆಯ ಹತ್ತಿರ ಆಟ ಆಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಚರಂಡಿಯಲ್ಲಿ ಬಿದ್ದಿದೆ. ನಂತರ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ತೆರಳುವಾಗ, ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದೆ.

ಮನೆಯ ಪಕ್ಕದ ಮೋರಿಯನ್ನು ದುರಸ್ತಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ದುರಸ್ತಿ ಮಾಡದ ತಪ್ಪಿಗೆ ಈಗ ಈ ಪುಟ್ಟ ಮಗು ಬಲಿಯಾಗಿದೆ.

ಚರಂಡಿ ದುರಸ್ತಿಯನ್ನು ನಿರ್ಲಕ್ಷ್ಯ ಮಾಡಿದ ಅಧಿಕಾರಿಗಳಿಗೆ ಗ್ರಾಮಸ್ಥರು ಇದೀಗ ಹಿಡಿಶಾಪ ಹಾಕುತ್ತಿದ್ದಾರೆ.ಮಗು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Leave A Reply

Your email address will not be published.