ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿ | ಸವಾರ ಮೃತ್ಯು

ಸ್ಕೂಟರ್‌ಗೆ ಟಿಪ್ಪರ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕೊಲ್ಲೂರು ಸಮೀಪದ ವಂಡ್ಸೆ ಮಸೀದಿ ರಸ್ತೆಯ ತಿರುವಿನಲ್ಲಿ ನಡೆದಿದೆ.

ಮೃತಪಟ್ಟ ಸ್ಕೂಟರ್ ಸವಾರರನ್ನು ರಾಜು ಮೊಗವೀರ ಎಂದು ಗುರುತಿಸಲಾಗಿದೆ.

ಬೆಳ್ಳಾಲ ಕಡೆಯಿಂದ ವಂಡ್ಸೆ ಕಡೆಗೆ ಬರುತ್ತಿದ್ದ ಸ್ಕೂಟರ್ ಗೆ ವಂಡ್ಸೆ ಯಿಂದ ಬೆಳ್ಳಾಲ ಕಡೆಗೆ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಕೂಟರ್ ಸಹಿತ ರಸ್ತೆಗೆ ಎಸೆಯಲ್ಪಟ್ಟರು.ಅವರ ಮೇಲೆ ಟಿಪ್ಪರ್ ಚಲಿಸಿದ ಪರಿಣಾಮ ತಲೆಗೆ ತೀವ್ರತರದ ಗಾಯವಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ಮೃತಪಟ್ಟರು ಎನ್ನಲಾಗಿದೆ.

ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave A Reply

Your email address will not be published.