ಚಿಕ್ಕಮಗಳೂರು | ವೈದ್ಯರ ಮೇಲೆ ಮಚ್ಚು ಝಳಪಿಸಿ ಮಾರಣಾಂತಿಕ ಹಲ್ಲೆ ನಡೆಸಿ ರಸ್ತೆಯಲ್ಲಿ ಎಸೆದು ಪರಾರಿ

ಖಾಸಗಿ ಆಸ್ಪತ್ರೆ ವೈದ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಈ ಘಟನೆ ನಡೆದಿದೆ.

ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವ ವಾಗಿ ವೈದ್ಯರು ಬಿದ್ದಿದ್ದರು. ವೈದ್ಯರು ರಸ್ತೆಬದಿಯಲ್ಲಿ ಬಿದ್ದು ಒದ್ದಾಡುತ್ತಿರುವ ಕರುಣಾಜನಕ ಸನ್ನಿವೇಶ ಸೃಷ್ಟಿಯಾಗಿತ್ತು.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಅಗ್ನಿಶಾಮಕ ಠಾಣೆ ಬಳಿಯೇ ಈ ಕೃತ್ಯ ನಡೆದಿದ್ದು, ಖಾಸಗಿ ಆಸ್ಪತ್ರೆಯ ಡಾ.ದೀಪಕ್ ಎಂಬವರು ಗಾಯಾಳು.

ಇವರು ಕ್ಲಿನಿಕ್‌ನಿಂದ ಮನೆಗೆ ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಈ ದಾಳಿ ನಡೆದಿದೆ. ಮಚ್ಚಿನಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು ಅವರನ್ನು ರಸ್ತೆ ಬದಿಗೆ ತಳ್ಳಿ ಹೋಗಿದ್ದರು. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವೈದ್ಯರನ್ನು ಸಾರ್ವಜನಿಕರು ಗಮನಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ಠಾಣೆಗೆ ಸಮೀಪದಲ್ಲೇ ಈ ಘಟನೆ ನಡೆದಿದ್ದು, ಹಲ್ಲೆಗೆ ಕಾರಣ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವಯಕ್ತಿಕ ಅಭ್ಯಾಸದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಇದೀಗ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ತರೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೋಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave A Reply

Your email address will not be published.