ತಂದೆಯ ಅಂತ್ಯಸಂಸ್ಕಾರದ ವೇಳೆ ಕುಸಿದು ಬಿದ್ದು ಮಗ ಸಾವು | ಮುಗಿಲು ಮುಟ್ಟಿದ ಬಂಧುಗಳ ಆಕ್ರಂದನ

ಬಂಟ್ವಾಳ : ತಂದೆಯ ಅಂತ್ಯ ಸಂಸ್ಕಾರದ ವೇಳೆ ಮಗನೂ ಹೃದಯಾಘಾತದಿಂದ ಕುಸಿದು ಬಿದ್ದು ಪುತ್ರನೂ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಿಂದ ವರದಿಯಾಗಿದೆ.

ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ಕೆ.ಪಿ.ಟಿ.ಯ ನಿವೃತ ಪ್ರೊಫೆಸರ್ ಭುಜಂಗ ಶೆಟ್ಟಿ ಅವರು ಕೋವಿಡ್ ನಿಂದ ನಿಧನರಾಗಿದ್ದು,ಅವರ ಅಂತ್ಯಕ್ರಿಯೆಯನ್ನು ಸೇವಾ ಭಾರತಿ ಕಾರ್ಯಕರ್ತರು ಕೋವಿಡ್ ನಿಯಾಮವಳಿಯಂತೆ ನೆರವೇರಿಸುತ್ತಿದ್ದ ವೇಳೆ ಅವರ ಮಗ ಶೈಲೇಶ್ ಶೆಟ್ಟಿ ಅವರು ಕುಸಿದು ಬಿದ್ದು ಅಸ್ವಸ್ಥಗೊಂಡರು.

ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು.

Leave A Reply

Your email address will not be published.