ಹಿಂದೂ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಅವಹೇಳನಕಾರಿ ಪೋಸ್ಟ್ | ಫಾರ್ವರ್ಡ್ ಮಾಡಿದ್ದ ನಾಲ್ವರ ಬಂಧನ, ಮೂಲ ಪುರುಷನಿಗಾಗಿ ಶೋಧ ಕಾರ್ಯ
![](https://hosakannada.com/wp-content/uploads/2021/06/Screenshot_20210602_180229.jpg)
ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಮತ್ತು ದುರ್ಗಾವಾಹಿನಿ ಸಂಘಟನೆಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
![](https://hosakannada.com/wp-content/uploads/2024/07/First.jpeg)
ಬಂಧಿತರನ್ನು ಬಜಾಲ್ ನ ನೌಶಾದ್ (27), ಸುಳ್ಯ ಕಸಬಾದ ಭವಾನಿ ಶಂಕರ್ (32), ಕಾವೂರಿನ ರವಿ ಅಲಿಯಾಸ್ ಟಿಕ್ಕಿ ರವಿ (38), ಮೂಡಿಬಿದಿರೆಯ ಧರೆಗುಡ್ಡೆಯ ಜಯ ಕುಮಾರ್ (33) ಎಂದು ಗುರುತಿಸಲಾಗಿದೆ.
![](https://hosakannada.com/wp-content/uploads/2024/07/Middle.jpeg)
ಬಂಧಿತರು ಶರಣ್ ಪಂಪ್ ವೆಲ್ ಮತ್ತು ದುರ್ಗಾವಾಹಿನಿಗೆ ಸಂಬಂಧಿಸಿದಂತೆ ಬಂದ ವಾಟ್ಸಾಪ್ ಸಂದೇಶವನ್ನು ಪರಿಶೀಲಿಸದೆ ಇತರ ಗ್ರೂಪ್ ಗಳಿಗೆ ಹಾಕಿದ್ದರು.
ಇತರ ಗ್ರೂಪ್ ಹಾಗೂ ಸ್ನೇಹಿತರಿಗೆ ರವಾನಿಸಿದ್ದರು. ಆ ನಂತರ ಅದು ವೈರಲ್ ಆಗಿ ಅನಗತ್ಯ ಟೆನ್ಶನ್ ಉಂಟು ಮಾಡಿತ್ತು.
ಇದೀಗ ಈ ಸಂದೇಶದ ಮೂಲ ಪುರುಷನನ್ನು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ತಿಳಿಸಿದ್ದಾರೆ.
1 Comment
Wow, fantastic blog format! How lengthy have you ever been running a blog for?
you made blogging look easy. The whole glance of your web site
is magnificent, as well as the content! You can see similar here dobry sklep