ನಾಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ | ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯ ಭವಿಷ್ಯ ನಿರ್ಧಾರ ಸಾಧ್ಯತೆ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಾಳೆ (ಜೂ.4) ಬೆಳಗ್ಗೆ 10ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ.

ಎಸ್​ಎಸ್​ಎಲ್​ಸಿ ಮತ್ತು ಪಿಯು ಪರೀಕ್ಷೆಗಳ ಬಗ್ಗೆ ಅತ್ಯಂತ ಮಹತ್ವದ ನಿರ್ಧಾರವನ್ನು ಅವರು ಸುದ್ದಿಗೋಷ್ಟಿಯಲ್ಲಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಂದ್ರ ಸರಕಾರ ಸಿಬಿಎಸ್ ಇ ಪರೀಕ್ಷೆಯನ್ನು ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಪರೀಕ್ಷೆ ನಡೆಸುವ ಬಗೆಗೆ ಚರ್ಚೆ ಆರಂಭವಾಗಿದೆ.

ಹೀಗಾಗಿ ಸಚಿವರ ಸುದ್ದಿ ಗೋಷ್ಠಿ ಕುತೂಹಲ ಮೂಡಿಸಿದೆ.

Leave A Reply

Your email address will not be published.