ಹಳ್ಳಕ್ಕೆ ಉರುಳಿದ ತಕ್ಷಣ ಕಾರಿಗೆ ಹೊತ್ತಿಕೊಂಡ ಬೆಂಕಿ | ಮೂವರ ಸಜೀವ ದಹನ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಕಾರಿನ ಒಳಗಿದ್ದ ಮೂವರು ಸಜೀವ ದಹನವಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ ಸಂಭವಿಸಿದೆ.

ಮುಂಜಾನೆ 5 ಗಂಟೆ ಸಮಯದಲ್ಲಿ ಈ ದಾರುಣ ಘಟನೆ ನಡೆದಿದ್ದು, ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐದು ಮಂದಿ ಪ್ರಯಾಣಿಕರಿದ್ದ ಕಾರು ಅಪಘಾತಕ್ಕೀಡಾಗಿದೆ. ಕಾರು ಹಲಗೂರಿನ ಮಹದೇಶ್ವರ ಪೆಟ್ರೋಲ್ ಬಂಕ್ ಸಮೀಪ ಹಳ್ಳಕ್ಕೆ ಪಲ್ಟಿಯಾಗಿ ಬಿದ್ದ ಕಾರಣ ಕ್ಷಣ ಮಾತ್ರದಲ್ಲಿ ಹೊತ್ತಿಕೊಂಡ ಬೆಂಕಿಯಿಂದ, ಕಾರಿನಲ್ಲಿದ್ದ ಮೂವರು ಸಜೀವವಾಗಿ ಸುಟ್ಟು ಕರಕಲಾಗಿದ್ದಾರೆ. ಇನ್ನುಳಿದ ಇಬ್ಬರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರಂತದಲ್ಲಿ ಶೇಖ್ ಫೈಸಲ್ (44), ಮೆಹಕ್ (33) ಮತ್ತು ಶೇಖ್ ಆಯಿಲ್ (11) ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೆಯೇ ಇವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗಿದೆ.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.