ನಾಯಕತ್ವ ಬದಲಾವಣೆಗೆ ಉತ್ತರಿಸಿದ ಯಡಿಯೂರಪ್ಪ | ಎಲ್ಲಿಯ ತನಕ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವುದಕ್ಕೆ ಮುಖ್ಯಮಂತ್ರಿ ಹೇಳಿದ್ದು ಹೀಗೆ…

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ,ಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ ಎಂಬುದನ್ನು ನಾನು ಒಪ್ಪಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ

ಬಿಜೆಪಿಯ ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ ಆಗಿರುವೆ. ನನ್ನ ಮೇಲೆ ಹೈಕಮಾಂಡ್ ವಿಶ್ವಾಸ ಇಟ್ಟು ಅವಕಾಶ ನೀಡಿದ್ದಾರೆ.ಹೈಕಮಾಂಡ್ ಮುಂದುವರೆಯಿರಿ ಅಂತಾರೋ ಅಲ್ಲಿಯವರೆಗೂ ಸೀಎಂ ಇರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬೆಂಗಳೂರಿನಲ್ಲಿ ರವಿವಾರ ಪತ್ರಕರ್ತರ ಜತೆ ಮಾತನಾಡಿದ ಯಡಿಯೂರಪ್ಪ ಅವರು, ‘ಯಾವಾಗ ರಾಜೀನಾಮೆ ಕೊಡಿ ಎಂದು ಹೈಕಮಾಂಡ್ ಹೇಳುತ್ತಾರೊ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಯಾವುದೇ ಗೊಂದಲದಲ್ಲಿ ನಾನು ಇಲ್ಲ’ ಎಂದರು.

‘ನನಗೆ ಅವಕಾಶ ಕೊಟ್ಟಿದ್ದಾರೆ. ಅದನ್ನು ಶಕ್ತಿ‌ಮೀರಿ ಬಳಸಿಕೊಳ್ಳುತ್ತೇನೆ. ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ. ಉಳಿದದ್ದು ಹೈಕಮಾಂಡ್‌ಗೆ ಬಿಟ್ಟಿದ್ದು’ ಎಂದರು.

ನಾಯಕತ್ವ ಬದಲಾವಣೆಯ ಬಗ್ಗೆ ಇರುವ ಗೊಂದಲದ ನಡುವೆ ಮುಖ್ಯಮಂತ್ರಿಯ ಈ ಹೇಳಿಕೆ ಕುತೂಹಲ ಮೂಡಿಸಿದೆ. ‘ರಾಜ್ಯದಲ್ಲೂ ಪರ್ಯಾಯ ನಾಯಕರು ಇಲ್ಲ ಎಂದು ಏನಿಲ್ಲ. ಇದನ್ನು ನಾನು ಒಪ್ಪುವುದಿಲ್ಲ’ ಎಂದು ಯಡಿಯೂರಪ್ಪ ಹೇಳಿದರು.

Leave A Reply

Your email address will not be published.