ಸುಳ್ಯ : ಲಾರಿ -ಪಿಕಪ್ ಢಿಕ್ಕಿ | ಓರ್ವ ಮೃತ್ಯು,ನಾಲ್ವರಿಗೆ ಗಾಯ

ಸುಳ್ಯ: ಪಿಕಪ್ ಹಾಗೂ ಕಂಟೈನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಅಡ್ಕಾರ್ ಸಮೀಪದ ಮಾವಿನಕಟ್ಟೆ ಎಂಬಲ್ಲಿ ಬುಧವಾರ ನಡೆದಿದೆ.

ಮೃತಪಟ್ಟವರನ್ನು ಸುಳ್ಯ ಪೆರಾಜೆಯ ಕುಂಬಲಚೇರಿ ನಿವಾಸಿ ದಿನಕರ ಎಂದು ಗುರುತಿಸಲಾಗಿದೆ.ಇವರು ಕುಂಬ್ರದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದವರು ಎನ್ನಲಾಗಿದೆ.

ಪುತ್ತೂರಿನ ಕುಂಬ್ರದಿಂದ ಸಂಪಾಜೆಗೆ ತೆರಳುತ್ತಿದ್ದ ಪಿಕಪ್ ಮತ್ತು ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ನಡುವೆ ಅಪಘಾತ ಸಂಭವಿಸಿ ಈ ಘಟನೆ ನಡೆದಿದೆ.

ಲಾರಿ ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಯ್ಷತನದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply

Your email address will not be published.