ಶಿರಾಡಿ: ಚಾಲಕನ ನಿಯಂತ್ರಣ ತಪ್ಪಿ ಅಡ್ಡಲಾಗಿ ಬಿದ್ದ ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್

ಉಪ್ಪಿನಂಗಡಿ: ಮಂಗಳೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಅಡುಗೆ ಅನಿಲ ಹೇರಿಕೊಂಡು ಸಾಗುತ್ತಿದ್ದ ಟ್ಯಾಂಕರೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಶಿರಾಡಿಯ ಕೊಡ್ಯಕಲ್ ಎಂಬಲ್ಲಿ ನಡೆದಿದೆ.

ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಟ್ಯಾಂಕರ್ ತೆರವುಗೊಳಿಸಲಾಗಿದೆ. ಸುಮಾರು ಒಂದು ಗಟೆ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

Leave A Reply

Your email address will not be published.