ಬೈಕ್ ಅಪಘಾತಕ್ಕೀಡಾಗಿ ಗಂಭೀರ ಸ್ಥಿತಿಯಲ್ಲಿದ್ದ ನಟ ಸಂಚಾರಿ ವಿಜಯ್ ನಿಧನ

ಬೆಂಗಳೂರು: ಬೈಕ್ ಅಪಘಾತಕ್ಕಿಡಾಗಿದ್ದ ಸ್ಯಾಂಡಲ್’ವುಡ್ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.

ಈ ಕುರಿತಂತೆ ನಟ ಸುದೀಪ್ ತಮ್ಮ ಟ್ವಿಟರ್’ನಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಸಂಚಾರಿ ನಿಯಮ ಪಾಲನೆ ಮಾಡದೆ ತನ್ನ ಜೀವಕ್ಕೆ ಸಂಚಕಾರ ತಂದುಕೊಂಡಿದ್ದಾರೆ ಸಂಚಾರಿ ವಿಜಯ್. ಹೌದು, ತನ್ನ ಸ್ನೇಹಿತನ ಜೊತೆಗೆ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಅವರು ಹೆಲ್ಮೆಟ್ ಧರಿಸಿರಲಿಲ್ಲ. ಇದೇ ಕಾರಣದಿಂದಾಗಿ ಅಪಘಾತವಾದಾಗ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಅವರ ಮೆದುಳು ಒಡೆದಿದ್ದು, ಕೋಮಾ ಸ್ಥಿತಿಗೆ ತಲುಪಿದ್ದರು. ಆದರೆ ಇದೀಗ ಅವರು ಇಹಲೋಕವನ್ನು ತ್ಯಜಿಸಿದ್ದಾರೆ.

ಬಿಜೆಪಿ ಮುಖಂಡರಾದ ಸಿ.ಟಿ. ರವಿ ಹಾಗೂ ಶೋಭಾ ಕರಂದ್ಲಾಜೆ ಅವರೂ ಸಹ ಟ್ವಿಟ್ ಮಾಡಿದ್ದು, ಅಗಲಿದ ನಟನಿಗೆ ಸಂತಾಪ ಸೂಚಿಸಿದ್ದಾರೆ.

ಸಂಚಾರಿ ವಿಜಯ್ ಭಾರತೀಯ ರಂಗಭೂಮಿ ಮತ್ತು ಚಲನಚಿತ್ರ ನಟರಾಗಿದ್ದು, ಅವರು ಮುಖ್ಯವಾಗಿ ಕನ್ನಡ ಚಿತ್ರರಂಗದಲ್ಲಿ ತುಂಬಾ ಪ್ರಸಿದ್ಧಿ ಹೊಂದಿದ್ದರು. ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ತನ್ನ ಮನೋಜ್ಞ ಅಭಿನಯದಿಂದಾಗಿ ಹೆಸರು ಮಾಡಿದ್ದರು. ಅವರು “ಸಂಚಾರಿ” ಎಂಬ ಸಂಸ್ಕೃತಿ ಕೇಂದ್ರ ಹಾಗೂ ವಿಶಿಷ್ಟ ರಂಗಭೂಮಿಯಿಂದ ನಾಟಕ ಕಲಾವಿದರಾಗಿ ತನ್ನ ವೃತ್ತಿಜೀವನ ಪ್ರಾರಂಭಿಸಿದರು. ಇಂದು ಅದು ಸೊಗಸಾದ ನಾಟಕ ತಂಡವಾಗಿಯೂ ಜನಪ್ರಿಯವಾಗಿದೆ.

ನಾನು ಅವನಲ್ಲ ಅವಳು ಕನ್ನಡ ಚಿತ್ರದಲ್ಲಿ ತೃತೀಯಲಿಂಗ ಪಾತ್ರಕ್ಕಾಗಿ ಅವರು ಅತ್ಯುತ್ತಮ ನಟನಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.

Leave A Reply

Your email address will not be published.