ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ : ಮುಖ್ಯಮಂತ್ರಿ ಬಿ.ಎಸ್ ವೈ

ಬೆಂಗಳೂರು: ಕೋವಿಡ್ -19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಹೀಗಾಗಿ ಬಿಪಿಎಲ್ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದರು.

ಬಿಪಿಎಲ್ ಕುಟುಂಬ ಗಳಲ್ಲಿ ಕೋವಿಡ್ ಸೋಂಕಿನಿಂದ ವಯಸ್ಕರು ಮೃತ ಪಟ್ಟಿದ್ದರೆ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

Leave A Reply

Your email address will not be published.