ಸ್ನೇಹಿತರೊಂದಿಗೆ ಕಾಡಿಗೆ ಬೇಟೆಗೆಂದು ತೆರಳಿದ್ದಾಗ ಅಚಾನಕ್ಕಾಗಿ ಗುಂಡು ಸಿಡಿದು ಒಬ್ಬ ಮೃತ್ಯು

ನಾಲ್ವರು ಸ್ನೇಹಿತರು ಬೇಟೆಗೆಂದು ಕಾಡಿಗೆ ಹೋಗಿದ್ದಾಗ ಆಕಸ್ಮಿಕವಾಗಿ ಒಬ್ಬ ವ್ಯಕ್ತಿಗೆ ಗುಂಡು ತಗುಲಿ, ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದ ಬಳಿ ನಡೆದಿದೆ.

ಶಂಕರ್ ಎಂಬುವವರು ಮೃತ ದುರ್ದೈವಿಯಾಗಿದ್ದಾರೆ.
ನಿನ್ನೆ ರಾತ್ರಿ ನಾಲ್ವರು ಸ್ನೇಹಿತರಾದ ಕೋದಂಡಪ್ಪ, ಶ್ರೀನಿವಾಸ, ಚೌಡಪ್ಪ ಮತ್ತು ಶಂಕರ್ ಬೇಟೆಗೆಂದು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಲೈಸೆನ್ಸ್ ಹೊಂದಿದ್ದ ಕೋದಂಡಪ್ಪ, ತನ್ನ ಕೋವಿ‌ ಹಿಡಿದುಕೊಂಡಿದ್ದಾಗ ಮಿಸ್ ಫೈರ್ ಆಗಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಗನ್ ಶೂಟ್ ಮಿಸ್ ಫೈರ್ ಆದಾಗ ಗುಂಡು ನೇರವಾಗಿ ಶಂಕರ್ ಹಣೆಗೆ ತಾಗಿದೆ. ಆದ ಕಾರಣ ಶಂಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

Leave A Reply

Your email address will not be published.