ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ತೀವ್ರ ಅನಾರೋಗ್ಯದಿಂದ ಮೃತ್ಯು

ವಿಟ್ಲ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ಸಂಭವಿಸಿದೆ.

ಮೃತಪಟ್ಟ ಯುವತಿ ಅಳಿಕೆ ಪದವಿಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಪೂವಪ್ಪ ಶೆಟ್ಟಿ ಮತ್ತು ಲತಾ ಪಿ ಶೆಟ್ಟಿ ದಂಪತಿಗಳ ಪುತ್ರಿ ಪ್ರಜಾಲಿ ಶೆಟ್ಟಿ ಎನ್ನಲಾಗಿದೆ.

ವಿವೇಕಾನಂದ ಪದವಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು ಅನಾರೋಗ್ಯದಿಂದ ಬಳಲುತ್ತಿದ್ದರು. ಎನ್ನಲಾಗಿದೆ. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಮೃತರು ತಂದೆ-ತಾಯಿ ಹಾಗೂ ಸಹೋದರ ಪ್ರಕ್ಯಾತ್ ಶೆಟ್ಟಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Leave A Reply

Your email address will not be published.