ಲಾಕ್‌ಡೌನ್ ಇದ್ದರೂ ಭಕ್ತರಿಗೆ ಅವಕಾಶ | ಧರ್ಮಸ್ಥಳ ಸಹಿತ ಕೆಲ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ನೋಟಿಸ್

ಮಂಗಳೂರು : ಕಠಿಣ ಲಾಕ್‌ಡೌನ್ ಇದ್ದರೂ ನಿಯಮ ಮೀರಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿರುವ ಧರ್ಮಸ್ಥಳ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಕೆಲ ದೇವಸ್ಥಾನಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ನೋಟೀಸ್ ನೀಡಿದ್ದಾರೆ.

ಲಾಕ್ ಡೌನ್ ಇದ್ದರೂ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಹಿನ್ನೆಲೆಯಲ್ಲಿ ಈ ನೋಟೀಸ್ ನೀಡಲಾಗಿದೆ.

ದೇವಸ್ಥಾನಗಳ ಆಡಳಿತ ಮಂಡಳಿಗಳು ಲಾಕ್ ಡೌನ್ ಇದ್ದರೂ ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಿದ್ದವು.

ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಿರುವ ಡಿಸಿ, ಕಡ್ಡಾಯವಾಗಿ ದರ್ಶನ ವ್ಯವಸ್ಥೆ ಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ.

Leave A Reply

Your email address will not be published.